ಹೊರೈಝನ್ ಶಾಲೆಗೆ ಶಿಕ್ಷಣ ಇಲಾಖೆಯಿಂದ ಅಭಿನಂದನಾ ಫಲಕ
ವಿಟ್ಲ ;2022 ನೇ SSLC ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದಕ್ಕಾಗಿ ಹೊರೈಝನ್ ಪಬ್ಲಿಕ್ ಸ್ಕೂಲ್ ವಿಟ್ಲ ಶಾಲೆಯನ್ನು ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆಯು ಅಭಿನಂದಿಸಿದೆ.
ದ.ಕ ಜಿಲ್ಲಾ ಉಪನಿರ್ದೇಶಕರಾದ ದಯಾನಂದ್ ರಾಮಚಂದ್ರ ನಾಯಕ್, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಹೊರೈಝನ್ ಶಾಲೆಯ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಇವರಿಗೆ ಬಂಟ್ವಾಳದ ಉನ್ನತಿ ಸೌಧದಲ್ಲಿ ನಡೆದ ಸಭೆಯಲ್ಲಿ ಅಭಿನಂದನಾ ಫಲಕವನ್ನು ವಿತರಿಸಿದರು.


