ಚೈತ್ರಾ ಕುಂದಾಪುರ ಮಾದರಿಯಲ್ಲೇ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ
ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ಮಾದರಿಯಲ್ಲೇ ಕೊಪ್ಪಳ ಜಿಲ್ಲೆಯಲ್ಲೂ ಒಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ಲಕ್ಷಾಂತರ ರೂ. ಟೋಪಿ ಹಾಕಿಸಿಕೊಂಡಿದ್ದಾರೆ.
ಕೊಪ್ಪಳದ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಹಣ ಕೊಟ್ಟು ಕೈ ಸುಟ್ಟುಕೊಂಡಿದ್ದಾರೆ. ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸದ್ದು ಮಾಡಿದ ಹಿನ್ನೆಲೆ ಗಾಯತ್ರಿ ಪ್ರಕರಣ ಮುನ್ನೆಲೆಗೆ ಬಂದಿದೆ. ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ಬಿಜೆಪಿ ಮುಖಂಡ ತಿಮ್ಮಾರೆಡ್ಡಿ ಗಿಲ್ಲೇಸುಗೂರ ಲಕ್ಷಾಂತರ ರೂ. ಹಣ ಕೊಟ್ಟು ವಂಚನೆ ಒಳಗಾಗಿದ್ದಾರೆ.




