February 4, 2026

ಪೂಜೆಗೆ ತೆರಳಿದ್ದ ವೈದ್ಯ  ಹೇಮಾವತಿ ನದಿಯಲ್ಲಿ ಮುಳುಗಿ ಮೃತ್ಯು

0
image_editor_output_image7679207-1694843210736.jpg

ಹಾಸನ: ಪೂಜೆಗೆ ತೆರಳಿದ್ದ ವೈದ್ಯರೊಬ್ಬರು ಹೇಮಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಖೋನಾಪುರದಲ್ಲಿ ನಡೆದಿದೆ.

ಮೃತರನ್ನು ಡಾ.ಚಂದ್ರಶೇಖರ್ (31) ಎಂದು ಗುರುತಿಸಲಾಗಿದೆ. ಅವರು ಹೊಳೆನರಸಿಪುರದ ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯಕ್ಕೆ ತೆರಳುವ ಮುನ್ನ ಖೋನಾಪುರದ ಐಲ್ಯಾಂಡ್‍ನಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ನದಿಗೆ ಸ್ನಾನಕ್ಕೆ ತೆರಳಿದ್ದಾಗ ಈ ಅವಘಡ ನಡೆದಿದೆ.

ಹಲವು ವರ್ಷಗಳಿಂದಲೂ ಚಂದ್ರಶೇಖರ್ ಹೇಮಾವತಿ ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದರು. ಅದರಂತೆ ಚಂದ್ರಶೇಖರ್ ಶುಕ್ರವಾರ ಸಹ ಪೂಜೆಗೂ ಮುನ್ನ ನದಿಗೆ ಇಳಿದಿದ್ದರು.

ಹೇಮಾವತಿ ನದಿ ನೀರು ಸಂಪೂರ್ಣ ಕಡಿಮೆಯಾಗಿದ್ದು, ಆಳ ಅರಿಯದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!