ಕಳೆದ ಅಕ್ಟೋಬರ್ 4 ರಂದು ಮಾವಿನಕಟ್ಟೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಹಿಂದೂಗಳ ಮನಸ್ಸಿಗೆ ನೋವಾಗುವಂತಹ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಭಾಷಣಕ್ಕೆ ಸ್ಥಳೀಯರೇ ಬೇಸರ ವ್ಯಕ್ತಪಡಿಸಿದ್ದರು.
ಸಹಬಾಳ್ವೆಯಿಂದಿದ್ದ ಗ್ರಾಮಕ್ಕೆ ಕಾಲಿಟ್ಟು ಶಾಂತಿ ಕದಡುವ ಕೆಲಸ ಮಾಡಿದ್ದರು. ಹಿಂದೂಗಳ ವಿರುದ್ಧ ಹಿಂದೂಗಳನ್ನೇ ಎತ್ತಿಕಟ್ಟುವ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.