ಕಾರು ಅಪಘಾತ: ಬಿಜೆಪಿ ಸಂಸದ ಸತೀಶ್ ಚಂದ್ರ ದುಬೆ ಆಸ್ಪತ್ರೆಗೆ ದಾಖಲು
ಪಾಟ್ನಾ: ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸಂಸದ ಸತೀಶ್ ಚಂದ್ರ ದುಬೆ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ತಡರಾತ್ರಿ ಪಾಟ್ನಾದಲ್ಲಿ ಸಂಭವಿಸಿದೆ.
ಭಾನುವಾರ ತಡರಾತ್ರಿ ಪಾಟ್ನಾದ ಮಹಾತ್ಮ ಗಾಂಧಿ ಸೇತು ಸೇತುವೆಯ ಮೇಲೆ ಕಾರು ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ದುಬೆ ಸೇರಿದಂತೆ ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸಂಸದರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕಂಟೈನರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಅವಘಡದಿಂದಾಗಿ ಗಾಂಧಿ ಸೇತು ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದುಬೆ ಮತ್ತು ಅವರ ಅಂಗರಕ್ಷಕ ಜೊತೆಗೆ ವಾಹನದ ಚಾಲಕ ಕೂಡ ಗಾಯಗೊಂಡಿದ್ದಾರೆ.




