ಪೊಲೀಸ್ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಹಲ್ಲೆ: ಗ್ರಾಮಸ್ಥರು ಸಿಟ್ಟಾಗಲು ಕಾರಣವೇನು ಗೊತ್ತೇ?
ಲಕ್ನೋ: ಮಹಿಳೆಯ ಮನೆಗೆ ನುಗ್ಗಿ ಆಕೆ ಮೇಲೆ ಹಲ್ಲೆ ನಡೆಸುವಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ, ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಂದೀಪ್ ಕುಮಾರ್ ನನ್ನು ಜನರು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ
ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಂದೀಪ್ ಕುಮಾರ್ ಎಂಬುವರು ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆ ಮೇಲೆ ದೈಹಿಕವಾಗಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಪೊಲೀಸ್ ನ್ನು ಹಿಡಿದು ವಿಚಾರಿಸಿದ್ದಾರೆ. ಸಿಟ್ಟಾದ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಹಲ್ಲೆಗೈದು ಕಂಬಕ್ಕೆ ಕಟ್ಟಿ, ವಿವಸ್ತ್ರಗೊಳಿಸಿದ್ದಾರೆ.




