December 15, 2025

ಮಂಗಳೂರು: ಗಣೇಶೋತ್ಸವ ಶೋಭಾಯಾತ್ರೆ: ಶೋಭಾಯಾತ್ರೆ ದಿನ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

0
IMG-20230706-WA0044.jpg

ಮಂಗಳೂರು: ಶ್ರೀ ಗಣೇಶೋತ್ಸವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ನಡೆಯುವ ದಿನಾಂಕಗಳಂದು ವೈನ್‌ಶಾಪ್/ಬಾರ್‌ ಹಾಗೂ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗಣೇಶೋತ್ಸವ ಅಂಗವಾಗಿ ಸೆ.19 ರಿಂದ ಸೆಪ್ಟೆಂಬರ್ 29ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆ ಹಾಗೂ ಮೆರವಣಿಗೆಗಳು ನಡೆಯಲಿದ್ದು, ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ.

ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಶೋಭಾಯಾತ್ರೆ ನಡೆಯುವ ಸ್ಥಳಗಳಲ್ಲಿ ಮತ್ತ್ಯ್ ಆಯಾ ದಿನಾಂಕಗಳಂದು ಮಧ್ಯಾಹ್ನ 12 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!