ಮಂಗಳೂರಿನ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ನಿಧನ
ಮಂಗಳೂರು: ಮಂಗಳೂರಿನ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸೆ.22ರಂದು ನಿಧನ ಹೊಂದಿದರು.
ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ಮೃತ ಹೆಡ್ ಕಾನ್ಸ್ಟೇಬಲ್.
1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು ಸದ್ಯದಲ್ಲೇ ಎಎಸ್ ಐ ಹುದ್ದೆಗೆ ಭಡ್ತಿಯಾಗುವವರಿದ್ದರು.




