March 15, 2026

ಉಡುಪಿ: ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತ್ಯು

0
image_editor_output_image-1275528419-1696080701623.jpg

ಉಡುಪಿ: ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಮೃತರನ್ನು ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ (48) ಎಂದು ಗುರುತಿಸಲಾಗಿದೆ. ಅವರು ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮಹಾಬಲ ದೇವಾಡಿಗ ದಿನಗೂಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಲಕ್ಷ್ಮಿ ತನ್ನ ಪತಿಯನ್ನು ಹುಡುಕಿಕೊಂಡು ಹೋದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದನ್ನು ನೋಡಿದ್ದಾಳೆ. ಪತಿಯನ್ನು ರಕ್ಷಿಸಲು ಹೋಗಿ ಆಕೆಯು ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!