December 15, 2025

ಮಡಿಕೇರಿ: ಹಿಂದೂ ಮುಖಂಡ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ:
ಒಂಬತ್ತು ಜನರು ಆರೋಪಿಗಳು ಖುಲಾಸೆ

0

ಮಡಿಕೇರಿ: ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಸತ್ರ ನ್ಯಾಯಾಲಯ 9 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತುಫೈಲ್, ನಯಾಜ್, ಆಫ್ರಿನ್, ಮೊಹಮ್ಮದ್, ಮುಸ್ತಾಫ, ಇಲಿಯಾಸ್, ಇರ್ಫಾನ್, ವಝೀದ್, ಹ್ಯಾರಿಸ್ ಎಂಬುವವರು ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ.

2016 ಆಗಸ್ಟ್ 14ರಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ನಡೆದಿತ್ತು. ಅಂದು ತಡ ರಾತ್ರಿ ಕುಶಾಲನಗರದ ಗುಡ್ಡೆಹೊಸೂರಿನಲ್ಲಿ ಪಂಜಿನ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರವೀಣ್ ನನ್ನು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!