ಬೆಳಗಾವಿ:ನಿನ್ನ ಬಳಿ ನಾನು ಸಾಲ ತಗೊಳಲ್ಲ ಎಂದು ಮಹಿಳೆಗೆ ಚಾಕು ಇರಿದ ಭೂಪನೊಬ್ಬ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಯನಾ ಪ್ರವೀಣ ಶೆಟ್ಟಿ(34) ಚಾಕು ಇರಿತಕ್ಕೊಳಗಾದ ಮಹಿಳೆಯಾಗಿದ್ದು, ಮಲ್ಲಿಕಾರ್ಜುನ ಕುಂಬಾರ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.