ವಿಟ್ಲ: ಕಾಂಗ್ರೆಸ್ ಕಚೇರಿಯಲ್ಲಿ ಅಲ್ಪಸಂಖ್ಯಾತ ಸಮಿತಿಯ ಸಭೆ
ವಿಟ್ಲ: ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಲ್ಪಸಂಖ್ಯಾತ ಸಮಿತಿಯ ನೇತೃತ್ವದಲ್ಲಿ ನಡೆಯಿತು.
ಕೆಪಿಸಿಸಿ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷರಾದ ಕೆ ಶಾಹುಲ್ ಹಮೀದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಕೆಪಿಸಿಸಿ ಅಲ್ಪಸಂಖ್ಯಾತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್, ಕೆಪಿಸಿಸಿ ಜಿಲ್ಲಾ ಕೋಶಾಧಿಕಾರಿ ಹಾಜಿ ಮೊಹಮ್ಮದ್ ಬಪ್ಪಳಿಗೆ.ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕರೀಂ ಕುದ್ದುಪದವು, ಕೆಪಿಸಿಸಿ ರಾಜ್ಯ ಸಂಚಾಲಕ ಹಬೀಬಲ್ಲಾ ಕನ್ನೂರು, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ರಮಾನಾಥ ವಿಟ್ಲ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ವಿಕೆಎಂ ಅಶ್ರಫ್, ವಿ ಅಬ್ದುಲ್ ರಹಿಮಾನ್(ಹಸೈನಾರ್ ನೆಲ್ಲಿಗುಡ್ಡೆ),ಪುತ್ತೂರು ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ಬ್ಲಾಕ್ ಪ್ರದಾನ ಕಾರ್ಯದರ್ಶಿ ವಿ ಎ ರಶೀದ್, ಹಾಗೂ ಪಕ್ಷಗಳು ಪ್ರಮುಖರಾದ ಎಂ ಕೆ ಮುಸಾ, ಶೇಕ್ ಅಲಿ ಸೆರಾಜೆ, ಅಬ್ದುಲ್ ನಾಸಿರ್ ಕೋಲ್ಪೆ, ಸಿದ್ದಿಕ್ ಕೆಂಪಿ, ಅಬ್ದುಲ್ ರಹಿಮಾನ್ ಕುರುಂಬಳ, ಅಸ್ಮಾ ಉಮರ್,ಶರೀಫ್ ಬುಲೆರಿಕಟ್ಟೆ, ಡಿ ಎಂ ರಶೀದ್, ಹಾರಿಸ್, ಎಂ ಎಸ್ ಅಬ್ದುಲ್ಲಾ ,ಹನೀಫ್ ಹಳೆಮನೆ ಹಾಗೂ ಮೊದಲಾದವರು ಉಪಸ್ಥಿತರಿದ್ದರು.




