August 25, 2026

ಪುತ್ತೂರು: ಸ್ನಾನ ಮಾಡಲು ಹೋಗಿ ಹೊಳೆಯಲ್ಲಿ ನಾಪತ್ತೆಯಾಗಿದ್ದ ತಸ್ಲೀಮ್ ಮೃತದೇಹ ಪತ್ತೆ:

0
image_editor_output_image1566394881-1697426655562

ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು. ತಸಗಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.

ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಅದರೂ, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸೇ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!