ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಈಶ್ವರ ಭಟ್ ನೀರ್ಪಾಜೆರ ಶ್ರದ್ಧಾಂಜಲಿ ಸಭೆ
ವಿಟ್ಲ: ಇತ್ತೀಚೆಗೆ ನಿಧನ ಹೊಂದಿದ ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಈಶ್ವರ ಭಟ್ ನೀರ್ಪಾಜೆ ಅವರ ಶ್ರದ್ಧಾಂಜಲಿ ಸಭೆ ಮಂಗಳವಾರ ಕನ್ಯಾನದಲ್ಲಿ ನಡೆಯಿತು.

ಮಾಜಿ ಸಚಿವ ಬಿ ರಮನಾಥ ರೈ ಅವರು ಮಾತನಾಡಿ ಎಲ್ಲಾ ಜಾತಿಯವರೊಂದಿಗಿನ ಒಡನಾಟ ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಹಿಂದುಳಿದ ವರ್ಗದ ಜನರ ಮೇಲೆ ಅವರಿಗಿದ್ದ ಪ್ರೀತಿ ವಿಶ್ವಾಸ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ಅವರಿಗಿತ್ತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ಯಾನ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಂಚಾಯತ್ ರಾಜ್ ಜಿಲ್ಲಾ ಅಧ್ಯಕ್ಷ ಸುಭಾಷ್ ಶೆಟ್ಟಿ ಕುಳಾಲು, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ರಾಜಶೇಖರ್ ಎನ್ ಕೆ ಕನ್ಯಾನ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮಜೀದ್ ಕನ್ಯಾನ, ಗಣೇಶ್ ಭಟ್ ನೀರ್ಪಾಜೆ, ಸುರೇಶ್ ಭಟ್ ಕೊಣಲೆ, ಶ್ಯಾಂ ಭಟ್ ಕೊಣಲೆ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ನಾಯ್ಕ ಮರ್ತನಾಡಿ, ಮೊಯಿದಿನ್ ಮಂಡ್ಯೂರು, ಸೆಲೆಸ್ತಿನಾ ಡಿಸೋಜ, ಮಾಜಿ ಅಧ್ಯಕ್ಷ ರಾದ ದೇವಕಿ, ಲಲಿತಾ, ರೇವತಿ ಉಪಸ್ಥಿತರಿದ್ದರು.




