ವಿಜಯಪುರ:ನಗರದ ಹೊರಭಾಗದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ ಗೇಟ್ ಬಳಿಯ ಟ್ರಕ್ ಬೈಲೈನ್ ಬಳಿ ದುರ್ಘಟನೆ ನಡೆದಿದೆ. ಟ್ರಕ್ ಬೈಲ್ ಬಳಿಯ ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದು ಪರಾರಿಯಾಗಿದೆ.
ಘಟನೆಯಲ್ಲಿ ಶಿವಾನಂದ ಚೌಧರಿ (25), ಸುನೀಲ್ ಖಾನಾಪೂರ (26), ಈರಣ್ಣ ಕೋಲಾರ (26) ಹಾಗೂ ಪ್ರವೀಣ್ ಪಾಟೀಲ್ (30) ಮೃತಪಟ್ಟಿದ್ದಾರೆ. ಮೃತರೆಲ್ಲರೂ ವಿಜಯಪುರ ನಗರದ ವಜ್ರ ಹನುಮಾನ್ ನಗರದ ವಾಸಿಗಳು.