5 ಲಕ್ಷ ರೂ. ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ
ಚಿಕ್ಕಮಗಳೂರು: ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಮಂಜುನಾಥ( 38) ಮೃತ ದುದೈವಿ.
ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.
ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.




