ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಕೊಲೆ
ಕೋಲಾರ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸ್ ಅಲಿಯಾಸ್ ಕೌನ್ಸಿಲರ್ ಸೀನಪ್ಪ ಅವರನ್ನು ಲಾಂಗು ಮತ್ತು ಮಚ್ಚುಗಳಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರದಲ್ಲಿ ಆ.23ರ ಸೋಮವಾರ ಮಧ್ಯಾಹ್ನದ ನಡೆದಿದೆ.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸ್ (62) ಹಲ್ಲೆಯಿಂದ ಸಾವನ್ನಪ್ಪಿದವರು.
ಶ್ರೀನಿವಾಸಪುರ ಹೊರವಲಯದಲ್ಲಿ ಮುಳಬಾಗಿಲು ರಸ್ತೆಯಲ್ಲಿ ತಾವೇ ನಿರ್ಮಿಸುತ್ತಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಕಟ್ಟಡದ ಸಮೀಪ ಈ ದೃಷ್ಕೃತ್ಯ ಜರುಗಿದೆ




