March 20, 2026

ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ ಬಾವಿಯಲ್ಲಿ ಪತ್ತೆ
 

0
IMG-20231024-WA0032.jpg

ಉಡುಪಿ : ಒಳಕಾಡುನಲ್ಲಿರುವ ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65ವ) ಅವರ ಶವವು ಮನೆ ಎದುರಿನ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎ.ಎಸ್.ಐ ಅರುಣ್ ಹಂಗಾರಕಟ್ಟೆ, ಹೆಡ್ ಕಾನ್ಸ್ಟೇಬಲುಗಳಾದ ಹರೀಶ್ ನಾಯ್ಕ್, ಶಂಕರ್ ಕಾನೂನು ಪ್ರಕ್ರಿಯೆ ನಡೆಸಿದ್ದು, ಸಾವಿನ ಕಾರಣ ಪೋಲಿಸ್ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಶವ ಬಾವಿಯಿಂದ ತೆರವುಗೊಳಿಸಲು ಅಗ್ನಿಶಾಮಕ ದಳ ಸಹಕರಿಸಿದೆ. ಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾಗಿದ್ದಾರೆ.”

Leave a Reply

Your email address will not be published. Required fields are marked *

error: Content is protected !!