July 9, 2026

ವಿದ್ಯುತ್ ಸ್ಪರ್ಶ: ಯುವಕ ಸಾವು

0
image_editor_output_image-1505243443-1698609214691.jpg

ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ.

ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ಸರ್ವಿಸ್ ತಂತಿ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!