December 16, 2025

ಉಳ್ಳಾಲ : ಮೂರು ವರ್ಷಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

0
IMG-20231030-WA0025.jpg

ಉಳ್ಳಾಲ : ಕಳೆದ ಮೂರು ವರ್ಷಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಇದೀಗ ಮತ್ತೆ ವ್ಯಕ್ತಿಯೋರ್ವರ ಆತ್ಮಹತ್ಯೆಯಿಂದ ಸುದ್ದಿಯಾಗಿದೆ.

2019 ರಲ್ಲಿ ಕೆಫೆ ಡೇ ಮಾಲಕ ಸಿದ್ದಾರ್ಥ್ ಆತ್ಮಹತ್ಯೆ ನಂತರ ಸರಣಿ ಆತ್ಮಹತ್ಯೆಗಳೇ ನೇತ್ರಾವತಿ ಸೇತುವೆಯಲ್ಲಿ ನಡೆದಿತ್ತು.

2020ರಲ್ಲಿ ಆತ್ಮಹತ್ಯೆ ತಡೆಗಾಗಿ ಮುಡಾ ಅಭಿವೃದ್ಧಿ ಅನುದಾನದ ಮೂಲಕ ತಡೆಬೇಲಿ ಅಳವಡಿಸಲಾಯಿತು. ತದನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು. ಇದೀಗ ಮತ್ತೆ ಕೆಫೇ ಡೇ ಮಾಲಕ ಸಿದ್ದಾರ್ಥ್ ತವರೂರು ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರ ಆತ್ಮಹತ್ಯೆಯಿಂದ ಮತ್ತೆ ಆತಂಕ ಮೂಡಿಸಿದೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯಾಯಿತು.

Leave a Reply

Your email address will not be published. Required fields are marked *

error: Content is protected !!