ಕಾಸರಗೋಡು: ಬೈಕ್ ಅಪಘಾತದಲ್ಲಿ ವ್ಯಕ್ತಿ ಸಾವು
ಕಾಸರಗೋಡು: ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತ ದಲ್ಲಿ ಬೆಳ್ಳೂರು ಅದ್ವಾಲದ ಕೃಷ್ಣ (50) ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆ ಯಲ್ಲಿ ರವಿವಾರ ರಾತ್ರಿ ನಡೆದಿದೆ.
ರಾತ್ರಿ ಕೃಷ್ಣ ಅವರಿಗೆ ಮನೆ ಸಮೀಪ ಹಾವು ಕಚ್ಚಿದ್ದು, ಇದರಿಂದ ಸಂಬಂಧಿಕ ಗೋಪಾಲ ರವರು ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ನೆಕ್ರಂಪಾರೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿದೆ.
ಆದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.




