May 9, 2026

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್: ಓರ್ವ ಮಹಿಳೆ ಮೃತ್ಯು, ಐವರಿಗೆ ಗಂಭೀರ ಗಾಯ

0
mcms.jpeg

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ.

ಯಲಹಂಕ ನಿವಾಸಿ ಸುರೇಖಾ (45) ಮೃತ ಮಹಿಳೆ.

ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ನಲ್ಲಿ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಇದಾಗಿದೆ.

ಗೋಣಿಬೀಡು  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಗಿನ ಜಾವ 4:45 ಸಮಯದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!