December 19, 2025

ಚೈತ್ರಾ ಕುಂದಾಪುರ ಮೇಲೆ ಜೈಲಿನಲ್ಲಿ ಹಲ್ಲೆ: ಆಫ್ರಿಕನ್ ಮಹಿಳಾ ಖೈದಿಗಳಿಂದ ಹಲ್ಲೆ

0
image_editor_output_image-1262086194-1699789730628

ಬೆಂಗಳೂರು: ಉದ್ಯಮಿ ಕಂ ಬಿಜೆಪಿ ಲೀಡರ್‌ಗೆ ಕೋಟ್ಯಂತರ ಹಣ ವಂಚಿಸಿದ ಪ್ರಕರಣದಲ್ಲಿ ಪರಪಪ್ಪನ ಅಗ್ರಹಾರ ಜೈಲಲ್ಲಿರುವ ಚೈತ್ರಾ ಕುಂದಾಪುರಳ ಮೇಲೆ ಇಂದು ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿದ್ದಾರೆ.

ಮಧ್ಯಾಹ್ನ ನಘಟನೆ ನಡೆದಿದ್ದು, ಮಹಿಳಾ‌ ವಿಚಾರಣಾಧೀನ ಖೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳೊಂದಿಗೆ ಕಿರಿಕ್ ತೆಗೆದಿದ್ದಾಳೆ. ಆಕೆ ಮತ್ತು ಆಫ್ರಿಕನ್ ಖೈದಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಆ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಗೆ ಈ ಕುರಿತು ಚೈತ್ರಾ ದೂರು ನೀಡಿದ್ದಾಳೆ.

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಕಂ ಬಿಜೆಪಿ ನಾಯಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಚೈತ್ರ ಕುಂದಾಪುರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!