ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಕೊನೆಗೂ ಪೊಲೀಸರ ವಶಕ್ಕೆ
ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯಿಂದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯು ಮಂಗಳೂರು ಏರ್ ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.
ಬೆಳಗಾವಿಯ ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.





