December 19, 2025

ಬೆಳ್ಳಾರೆ: ತಂದೆ-ತಾಯಿ ಮೇಲೆ ಕತ್ತಿ ಬೀಸಿ ಹಲ್ಲೆ ನಡೆಸಿದ ಮಗ: ಗಂಭೀರ ಗಾಯಗೊಂಡ ಇಬ್ಬರು ಮಂಗಳೂರು ಆಸ್ಪತ್ರೆಗೆ ದಾಖಲು

0
first-information-report

ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ.

ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲಗುಡ್ಡೆ ಕೊಡಿಯಾಲ ಎಂಬಲ್ಲಿ ಮಂಜುನಾಥ್ ಮತ್ತು ಪತ್ನಿಗೆ ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದು ಕೊಲೆಯತ್ನ ಮಾಡಿದ್ದು, ಕಂಠಪೂರ್ತಿ ಕುಡಿದ ಪುತ್ರ ಜಮೀನು ವಿಚಾರವಾಗಿ ತಂದೆ, ತಾಯಿ ಮೇಲೆ ಹಲ್ಲೆ ನಡೆಸಿದ್ದಾನ್ನೆಲಾಗಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!