December 15, 2025

ಉಡುಪಿ: ಸೊಮೇಶ್ವರ ಪೆಟ್ರೋಲ್ ಪಂಪ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್: ಓರ್ವ ಸ್ಥಳದಲ್ಲೇ ಸಾವು

0
image_editor_output_image-610454101-1700818592456.jpg

ಉಡುಪಿ: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ.

ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ‌.

Leave a Reply

Your email address will not be published. Required fields are marked *

You may have missed

error: Content is protected !!