May 9, 2026

ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿ ಮನೆ ಬರುತ್ತಿದ್ದ ವೈದ್ಯ ಹಾವು ಕಚ್ಚಿ ಮೃತ್ಯು

0
image_editor_output_image-1032954177-1701421641885.jpg

ತುಮಕೂರು: ಸಿದ್ಧಾರ್ಥ್ ವೈದ್ಯಕೀಯ ಕಾಲೇಜಿನಲ್ಲಿ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿ ಮನೆ ಬರುತ್ತಿದ್ದ ವೈದ್ಯ ಹಾವು ಕಚ್ಚಿ ಮೃತಪಟ್ಟಿದ್ದಾರೆ.

ಕೇರಳ ಮೂಲದ ಆದಿತ್ ಬಾಲಕೃಷ್ಣನ್ ಮೃತ ದುರ್ವೈವಿ. ಸಿದ್ಧಾರ್ಥ ವಿಶ್ವವಿದ್ಯಾಯಲದ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿ ಹೆಗ್ಗರೆಯಲ್ಲಿರುವ ಮನೆ ಬಳಿ ಕಾರು ನಿಲ್ಲಿಸುವ ಸಮಯದಲ್ಲಿ ಹಾವು ಕಚ್ಚಿದೆ.

ಇದನ್ನು ಗಮನಿಸಿದೇ ಮನಗೆ ತೆರಳಿದ್ದು, ಸ್ವಲ್ಪ ಸಮಯದ ಬಳಿಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇನ್ನು ಮೃತ ವಿದ್ಯಾರ್ಥಿ ಶವವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದ್ದು, ಹಾವು ಕಡಿತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇನ್ನು ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!