March 18, 2026

ಲಾರಿ, ಟಾಟಾ ಏಸ್ ವಾಹನಗಳ ನಡುವೆ ಅಪಘಾತ: ನಾಲ್ವರು ಸಾವು

0
image_editor_output_image59903682-1701938816955.jpg

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ವಾಹನಗಳ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್‌ನಲ್ಲಿದ್ದ ಅಂಬರೀಶ್ (30) ರಮೇಶ್ (28) ರವಿ (20) ಚಾಲಕ ಇಸ್ಮಾಯಿಲ್ (27) ಮೃತಪಟ್ಟವರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಅಪಘಾತದಲ್ಲಿ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು ಸಿಂಧನೂರು ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!