ಬೆಳ್ತಂಗಡಿ: ಖೋಟ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.
ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.




