ಸುರತ್ಕಲ್: ಸಂಘಪರಿವಾರದ ಮುಖಂಡರ ಉಪಸ್ಥಿತಿಯಲ್ಲಿ ಆಯಿಶಾ ಯಾನೆ ಅಕ್ಷತಾ ಪೊಲೀಸ್ ಠಾಣೆಗೆ ಹಾಜರು
ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಪ್ರಶಾಂತ್ ಭಂಡಾರಿ (31) ಮತ್ತು 3ನೇ ಬ್ಲಾಕ್ ಆಶ್ರಯ ಕಾಲನಿಯ ನಿವಾಸಿ ಆಯಿಶಾ ಮದುವೆಯಾಗಿ ಶುಕ್ರವಾರ ಸಂಜೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸಿದರು.
3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಅನ್ಯಧರ್ಮಿಯರಾದ ಕಾರಣ ಒಪ್ಪಿಗೆ ದೊರೆಯುವ ಅನುಮಾನ ಬಂದ ಮೇರೆಗೆ ಜತೆಯಾಗಿ ಡಿ. 1ರಂದು ನಾಪತ್ತೆಯಾಗಿದ್ದರು. ಇದೀಗ ವಿವಾಹವಾಗಿ ಪತ್ತೆಯಾಗಿದ್ದಾರೆ. ಆಯಿಶಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಾಯಿಸಿಕೊಂಡಿದ್ದಾರೆ.
ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಸಂಘಪರಿವಾರದ ಪ್ರಮುಖರು ಉಪಸ್ಥಿತರಿದ್ದರು.




