ಕ್ಯಾಂಡಲ್ ಬೆಳಕಿನಲ್ಲಿ ಬೈಕ್ಗೆ ಪೆಟ್ರೋಲ್ ಹಾಕುವಾಗ ಸ್ಫೋಟ: SSLC ವಿದ್ಯಾರ್ಥಿನಿ ಮೃತ್ಯು
ತುಮಕೂರು: ಮೊಂಬತ್ತಿ ಬೆಳಕಿನಲ್ಲಿ ಬೈಕ್ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್ ಬಾಟಲ್ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಕುಣಿಗಲ್ ತಾಲೂಕು ಎಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದ ಲಕ್ಷ್ಮಣರವರ ಮಗಳು ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದಳು.




