ಶಿವಮೊಗ್ಗ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಶಿವಮೊಗ್ಗ: ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಸಿದ್ದಾಪುರದ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ, ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತನಾಗಿರುವ ಗೋಕುಲ್ ಹಲ್ಲೆಗೊಳಗಾದವರು.
ಭದ್ರಾವತಿಯಲ್ಲಿ ಇಸ್ಪಿಟ್ ಹಾವಳಿ ಹೆಚ್ಚಾಗಿದೆ ಎಂದು ಗೋಕುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಗೆಲ್ಲುವ ಮುಂಚೆ ಯುವಕರಿಗೆ ಉದ್ಯೋಗ ಕೊಡಿಸುತ್ತೇನೆ, ಎಂಪಿಎಂ ಪ್ರಾರಂಭಿಸುತ್ತೇನೆ ಎಂದ ಶಾಸಕರೇ ಈಗ ಯಾಕೆ ಇಸ್ಪಿಟ್ ಹಾವಳಿ ತಡೆಗಟ್ಟುತ್ತಿಲ್ಲಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರನ್ನು ಪ್ರಶ್ನಿಸಿ ಪೋಸ್ಟ್ ಮಾಡಿದ್ದರು.




