ಮಡಿಕೇರಿ: ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ಹಣ ಪಡೆದು ವಂಚನೆ: ಮೂವರು ಆರೋಪಿಗಳ ಬಂಧನ
ಮಡಿಕೇರಿ: ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂ. ನಗದು ಹಾಗೂ 2,00,000 ರೂ. ಚೆಕ್ ಪಡೆದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29), ಕಡಬದ ನಿವಾಸಿ ಸಾಧಿಕ್ (30) ಹಾಗೂ ಮತ್ತೊಬ್ಬ ಆರೋಪಿ ಫೈಸಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ.
ಬಂಧಿತ ಆರೋಪಿಗಳಿಂದ ಮೊಬೈಲ್, ನಗದು ಹಾಗೂ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ಅಮೀರ್ ತಲೆಮರೆಸಿಕೊಂಡಿದ್ದಾನೆ.




