ಮೂಡಿಗೆರೆ: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವು: ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿದ ಪೋಷಕರು
ಚಿಕ್ಕಮಗಳೂರು: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಗೃಹಿಣಿಯ ಪೋಷಕರು ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದಲ್ಲಿ ನಡೆದಿದೆ.
ಶ್ವೇತಾ (31) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ.
ಮೂರು ವರ್ಷದ ಹಿಂದೆ ಶ್ವೇತಾ ದರ್ಶನ್ ಎಂಬವರನ್ನು ವಿವಾಹವಾಗಿದ್ದರು. ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಶ್ವೇತಾಳ ಪೋಷಕರು ಆರೋಪಿಸಿದ್ದಾರೆ




