December 15, 2025

ಬಂಟ್ವಾಳ: ಬಸ್ ನಲ್ಲಿ ಪಿಕ್ ಪಾಕೆಟ್ ಮಾಡಿ ಓಡಿ ಹೋಗಲು ಯತ್ನ: ಆರೋಪಿಯ ಸೆರೆ

0
image_editor_output_image1649681838-1703312880497.jpg

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಓಡಿ ಹೋಗಲು ಯತ್ನಿಸಿ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಇಂದು ಬಿಸಿರೋಡಿನಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬ ವ್ಯಕ್ತಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪುತ್ತೂರು ನಿವಾಸಿ ಕರುಣಾಕರ ಎಂಬವರ ಪ್ಯಾಂಟ್ ನ ಕಿಸೆಯಿಂದ ಹಣದ ಪಾಕೆಟ್‌ ನ್ನು ಕಿತ್ತುಕೊಂಡು ಹೋಗಿರುವ ಘಟನೆ ನಡೆದಿತ್ತು.

ಕರುಣಾಕರ ಅವರು ಬಿ.ಸಿ ರೋಡಿನಿಂದ ಪುತ್ತೂರಿಗೆ ತೆರಳುವುದಕ್ಕೆ ಬಿಸಿರೋಡಿನಲ್ಲಿ ಖಾಸಗಿ ಬಸ್ ಹತ್ತಿದ್ದರು. ಬಸ್ ತುಂಬಾ ಪ್ರಯಾಣಿಕರು ಇದ್ದ ಕಾರಣ ಇವರು ನಿಂತುಕೊಂಡಿದ್ದರು. ಈ ಸಂದರ್ಭದಲ್ಲಿ ಬಸ್ಸ್ ನಲ್ಲಿದ್ದ ಕಳ್ಳ ನಜೀರ್ ಎಂಬಾತ ಬಸ್ ಬಿ.ಸಿ ರೋಡಿನಿಂದ ಪಾಣೆಮಂಗಳೂರು ತಲುಪುತ್ತಿದ್ದಂತೆ ಕರುಣಾಕರ ಅವರ ಪ್ಯಾಂಟ್ ನ ಹಿಂಬದಿಯಲ್ಲಿ ಇರಿಸಿದ್ದ ಹಣದ ಪರ್ಸ್ ನ್ನು ಕಿತ್ತುಕೊಂಡು ಬಸ್ ನಿಂದ ಇಳಿದಿದ್ದಾನೆ. ಈತ ಪರ್ಸ್ ಎಗರಿಸುವುದನ್ನು ಬಸ್ಸಿನೊಳಗಿದ್ದ ಪ್ರಯಾಣಿಕನೋರ್ವ ನೋಡಿದ್ದು, ಕೂಡಲೇ ಕರುಣಾಕರ ಅವರಿಗೆ ತಿಳಿಸಿದ್ದಾನೆ‌‌.

Leave a Reply

Your email address will not be published. Required fields are marked *

error: Content is protected !!