December 16, 2025

ಕಾಲೇಜ್ ಗಳಲ್ಲಿ ಸಮವಸ್ತ್ರ ಬಗ್ಗೆ ಗೊಂದಲ ಬೇಡ-ಮೊದಲಿನಂತೆ ನಡೆಯುತ್ತದೆ: ಸಚಿವ ಮಧು ಬಂಗಾರಪ್ಪ

0
image_editor_output_image1028912440-1703405573961

ಶಿವಮೊಗ್ಗ: ಸಿಎಂ ಯಾವಾಗ ಸಭೆ ನಿಗದಿ ಮಾಡುತ್ತಾರೋ ಗೊತ್ತಿಲ್ಲ. ಇನ್ನು ಚರ್ಚೆಯ ಹಂತದಲ್ಲಿದೆ. ಕಾನೂನು ತಜ್ಞರ ಜೊತೆ ಚರ್ಚೆ ನಡೆಸಬೇಕು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ಚುನಾವಣೆಗೂ ಮುನ್ನ ಕಾಂಗ್ರೆಸ್ ಬೇಕು ಅಂದಿತ್ತು. ಬಿಜೆಪಿಯವರು ಬೇಡ ಎಂದಿದ್ದರು. ಸರ್ಕಾರ ಬಂದಾಗ ಯಾರೋ ಕೇಳಿದ್ದಾರೆ. ಸಿಎಂ ಹೇಳಿದ್ದಾರೆ. ಸರ್ಕಾರವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸಮವಸ್ತ್ರ ವಿಚಾರಕ್ಕೆ ಯಾವುದೇ ಗೊಂದಲ ಇಲ್ಲ. ಮೊದಲಿನಂತೆ ನಡೆಯುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿಗೆ ಚಾಲನೆ ನೀಡುತ್ತೇವೆ. ಸ್ವಾಮಿ ವಿವೇಕಾನಂದ ಜಯಂತಿಯ ದಿನ ಚಾಲನೆ ನೀಡುತ್ತೇವೆ. ಆ ದಿನವೇ ಫಲಾನುಭವಿಗಳ ಖಾತೆಗೆ ಹಣ ಹೋಗಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!