March 26, 2026

ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷನ ಬಂಧನ

0
image_editor_output_image-1822271194-1703570148162.jpg

ಚಿಕ್ಕಮಗಳೂರು: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ ಕುಲಕರ್ಣಿಯನ್ನು ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಶ್ರೀ ರಾಮಸೇನೆಯ ಮುಖಂಡ ರಂಜಿತ್ ಶೆಟ್ಟಿ ವಶಕ್ಕೆ ಪಡೆದಿದ್ದಾರೆ.

ಶ್ರೀರಾಮಸೇನೆಯು ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ಸರ್ವೆ ನಂ 57 ರ ಜನ್ನತ್ ನಗರದಲ್ಲಿರುವ ದರ್ಗಾದಲ್ಲಿ ದತ್ತಜಯಂತಿಯ ಹೊಸ ಆಚರಣೆಗೆ ಮುಂದಾಗಿತ್ತು. ದತ್ತಜಯಂತಿ ಆಚರಣೆಯ ಕರೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ವಶಕ್ಕೆ ಪಡೆಲಾಗಿದೆ. ಬಳಿಕ ಗೌಪ್ಯ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.

ಸದ್ಯ ದರ್ಗಾ ಸುತ್ತಮುತ್ತ 200 ಮೀಟರ್ 4 ದಿನ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಹೇರಿದೆ.

Leave a Reply

Your email address will not be published. Required fields are marked *

error: Content is protected !!