January 31, 2026

ಕಾಪು: ಟ್ಯಾಂಕರ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಸ್ಥಳದಲ್ಲೇ ವ್ಯಕ್ತಿ ಮೃತ್ಯು

0
image_editor_output_image-1853699567-1704002915793.jpg

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.30ರ ರಾತ್ರಿ ಉದ್ಯಾವರದಲ್ಲಿ ನಡೆದಿದೆ.

ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ.

ಜಯ ಅವರು ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಗಂಭೀರ ಏಟಾದ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆ ಮತ್ತು ಕಟಪಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಜಯ ದೇವಾಡಿಗ ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!