September 20, 2024

ಮುಸ್ಲಿಂ ಸಮುದಾಯದ ವಿರುದ್ಧ ನಡೆಯುವ ಸರಕಾರಿ ಪ್ರಾಯೋಜಿತ ತಾರತಮ್ಯದ ವಿರುದ್ಧ ಎಸ್ ಡಿ ಪಿ ಐ ಯಿಂದ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ಹಾಗೂ ಪ್ರತಿಭಟನೆ

0

ಮಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ನೀತಿ ಅನುಸರಿಸುತ್ತಿರುವ ಸರಕಾರದ ಧೋರಣೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜನವರಿ 5 ಶುಕ್ರವಾರ ಮಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ.

ಅಪರಾಹ್ನ 3 ಕ್ಕೆ ಮಿಲಾಗ್ರಿಸ್ ಚರ್ಚ್ ಬಳಿಯಿಂದ ಆರಂಭವಾಗುವ ಜಾಥವು ಕ್ಲಾಕ್ ಟವರ್ ವರಗೆ ಸಾಗಿ ಬಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.

ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ರವರ ನೇತೃತ್ವದಲ್ಲಿ ನಡೆಯುವ ಜಾಥಾ ಮತ್ತು ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ದಲಿತ ಸಂಘಟನೆಗಳ ಮುಖಂಡರಾದ ಶ್ರೀ ಭಾಸ್ಕರ್ ಪ್ರಸಾದ್ ಹಾಗೂ ರಾಜ್ಯ ಸಮಿತಿ ಸದಸ್ಯೆ ಸಾಹಿದಾ ತಸ್ನೀಂ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಮಾತನಾಡಲಿದ್ದಾರೆ. ಸರಕಾರದ ತಾರತಮ್ಯ ಧೋರಣೆ ವಿರುದ್ಧ ನಡೆಯುವ ಈ ಪ್ರತಿಭಟನೆಗೆ ಪಕ್ಷ ,ಜಾತಿ ಸಂಘಟನಾ ಬೇದ ಮರೆತು ಎಲ್ಲಾ ಪ್ರಜಾಪ್ರಭುತ್ವ ಪ್ರಿಯರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಕಟಣೆ
ಮುಹಮ್ಮದ್ ಬಷೀರ್
ಜಿಲ್ಲಾ ಮಾಧ್ಯಮ ಸಂಯೋಜಕ

Leave a Reply

Your email address will not be published. Required fields are marked *

error: Content is protected !!