February 3, 2026

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲು

0
image_editor_output_image-1985812179-1704963297098.jpg

ಚೆನ್ನೈ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಧರ್ಮಪುರಿಯ ಬೊಮ್ಮಿಡಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜನವರಿ 8 ರಂದು ಪಾಪ್ಪಿರೆಡ್ಡಿಪಟ್ಟಿ ಬಳಿಯ ಬೊಮ್ಮಿಡಿಯ ಸೇಂಟ್ ಲೂಡ್ರ್ಸ್ ಚರ್ಚ್‍ನ ಹೊರಗೆ ನಡೆದ ರ‍್ಯಾಲಿಯಲ್ಲಿ ಚರ್ಚ್‍ಗೆ ಅವರು ಪ್ರವೇಶಿಸುವುದನ್ನು ವಿರೋಧಿಸಿದ ಕ್ರಿಶ್ಚಿಯನ್ ಯುವಕರ ಗುಂಪಿನೊಂದಿಗೆ ಅಣ್ಣಾಮಲೈ ವಾಗ್ವಾದ ನಡೆಸಿದ್ದರು.

ಈ ವೇಳೆ ಚರ್ಚ್ ಪ್ರವೇಶಿಸದಂತೆ ತಡೆದ ಪ್ರತಿಭಟನಾಕಾರರು ಮತ್ತು ಬಿಜೆಪಿ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ಗದ್ದಲದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಸಹ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!