ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುದೇಶ್ ಭಂಡಾರಿ ಎರ್ಮೆನಿಲೆ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಇವರು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿದ್ದರು. ಪ್ರಸ್ತುತ ವಿಟ್ಲ ತಾಲೂಕು ಕರ್ನಾಟಕ ರೈತ ಸಂಘ ಹಸಿರು ಸೇನೆ ಇದರ ಕಾರ್ಯದರ್ಶಿಯಾಗಿದ್ದಾರೆ.