December 19, 2025

ಪುತ್ತೂರು: ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ಆರೋಪ: ಆಸ್ಪತ್ರೆಗೆ ದಾಖಲು

0
ram-mandir-mantraksthe.jpg

ಪುತ್ತೂರು: ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮುಂಡೂರು ಎಂಬಲ್ಲಿ ನಡೆದಿದೆ.

ಮುಂಡೂರು ಗ್ರಾಮದಲ್ಲಿ ಅಕ್ಷತೆ ಹಂಚುವ ಹೊಣೆ ಹೊತ್ತಿದ್ದ ಸಂತೋಷ್ ಮೇಲೆ ಸ್ಥಳೀಯ ನಿವಾಸಿ ಧನಂಜಯ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ ಆರೋಪಿಸಲಾಗಿದೆ. ಗಲಾಟೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಂತೋಷ್ ಅವರು ಮನೆ ಮನೆಗೆ ಅಕ್ಷತೆ ಹಂಚುವುದಕ್ಕೆ ಒಂದು ಗುಂಪು ವಿರೋಧವ್ಯಕ್ತಪಡಿಸಿತ್ತು. ಇದೇ ದ್ವೇಷದಿಂದ ಸಂತೋಷ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಸಂತೋಷ್ ಹಾಗೂ ಆತನ ತಾಯಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!