September 20, 2024

ಬಂಟ್ವಾಳ: ಬೈಕ್ ಗೆ ಸರಕಾರಿ ಬಸ್ ಢಿಕ್ಕಿ:
ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು 

0

ಬಂಟ್ವಾಳ: ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದ ಬಳಿ ಮಂಗಳವಾರ ಸಂಭವಿಸಿದೆ.

ಬಕ್ ಸವಾರ ಪುತ್ತೂರು ತಾಲೂಕಿನ ಕೊಳ್ತಿಗೆ, ಮಣಿಕ್ಕರ ಮೊಗಪ್ಪೆ ನಿವಾಸಿ ಸತೀಶ್ ಕುಮಾರ್ ಅವರ ಪುತ್ರ ನಂದಕುಮಾರ್. ಎಂ ಮೃತಪಟ್ಟವರಾಗಿದ್ದಾರೆ.

ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಸ್ಪತ್ರೆ ತಿರುವು ಬಳಿ ಬೈಕ್ ಗೆ ಢಿಕ್ಕಿಯಾಗಿತ್ತು. ಅಪಘಾತದಿಂದ ಗಂಭೀರ ಗಾಯಗೊಂಡ ನಂದಕುಮಾರ್ ಅವರನ್ನು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

ನಂದ ಕುಮಾರ್ ಅವರು ರಬ್ಬರ್ ಟ್ಯಾಪಿಂಗ್ ವೃತ್ತಿ ನಡೆಸುತ್ತಿದ್ದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!