December 19, 2025

ಬಂಟ್ವಾಳ: ಸಜಿಪಮೂಡ ಗ್ರಾ.ಪಂ ಸದಸ್ಯ ಹಾಜಿ ಅಬ್ದುಲ್ ಅಝೀಝ್ ಬಿಐಬಿ ಅನಾರೋಗ್ಯದಿಂದ ನಿಧನ

0
image_editor_output_image237031492-1705589641493.webp

ಬಂಟ್ವಾಳ : ಸಜಿಪಮೂಡ ಗ್ರಾಮ ಪಂಚಾಯತ್ ಸದಸ್ಯ, ಬೊಳ್ಳಾಯಿ ನಿವಾಸಿ ಹಾಜಿ ಅಬ್ದುಲ್ ಅಝೀಝ್ ಬಿಐಬಿ ಅವರು ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬುಧವಾರ ಹಠಾತ್ ಅನಾರೋಗ್ಯ ಕಾಣಿಸಿಕೊಂಡಿದ್ದು ರಾತ್ರಿ ವೇಳೆ ಮಂಗಳೂರಿನ ಕಂಕನಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಗುರುವಾರ ಮಧ್ಯಾಹ್ನ ವೇಳೆಗೆ ನಿಧನರಾಗಿದ್ದಾರೆ.

ಮೃತ ಹಾಜಿ ಅಬ್ದುಲ್ ಅಝೀಝ್ ಅವರು ಬೊಳ್ಳಾಯಿಯ ಪ್ರತಿಷ್ಠಿತ ಬಿಐಬಿ ಫ್ಯಾಮಿಲಿಯ ಸದಸ್ಯರಾಗಿದ್ದು, ಬೊಳ್ಳಾಯಿ ಬದ್ರಿಯಾ ಜುಮಾ ಮಸೀದಿಯ ಆಡಳಿತ ಕಮಿಟಿಯ ಸದಸ್ಯರೂ, ಬೊಳ್ಳಾಯಿ ಕುತುಬಿಯ್ಯತ್ ಕಮಿಟಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಸಕ್ರಿಯ ಕಾಂಗ್ರೆಸ್ ಸದಸ್ಯರಾಗಿ ಹಲವು ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ಸ್ಥಳೀಯವಾಗಿ ಜನಪರ ಸೇವಾ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮೃತರು ಓರ್ವ ಪುತ್ರ ಸಹಿತ ಅಪಾರ ಬಂಧು-ಮಿತ್ರಾದಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!