ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು
ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಗುಳಿಗಳ ಗುರಿ ಎಂಬಲ್ಲಿ ನಡೆದಿದೆ.
ಮಂಕುಡೆ ಗುಳಿಗಳ ಗುರಿ ನಿವಾಸಿ ಕೇಶವ ದೇವಾಡಿಗ ಅವರ ಪುತ್ರ ರವೀಂದ್ರ ದೇವಾಡಿಗ ( 32) ಮೃತಪಟ್ಟವರು.
ಕೂಲಿ ಕೆಲಸ ಮಾಡುತ್ತಿದ್ದ ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾಲು ಬಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





