December 20, 2025

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

0
IMG-20240115-WA0021.jpg

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಗುಳಿಗಳ ಗುರಿ ಎಂಬಲ್ಲಿ ನಡೆದಿದೆ.

ಮಂಕುಡೆ ಗುಳಿಗಳ ಗುರಿ ನಿವಾಸಿ ಕೇಶವ ದೇವಾಡಿಗ ಅವರ ಪುತ್ರ ರವೀಂದ್ರ ದೇವಾಡಿಗ ( 32) ಮೃತಪಟ್ಟವರು.

ಕೂಲಿ ಕೆಲಸ ಮಾಡುತ್ತಿದ್ದ ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾಲು ಬಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Leave a Reply

Your email address will not be published. Required fields are marked *

You may have missed

error: Content is protected !!