March 21, 2026

‘ರಾಮಲೀಲಾ’ ನಾಟಕ ಪ್ರದರ್ಶನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಹನುಮಾನ್ ಪಾತ್ರಧಾರಿ

0
image_editor_output_image-1944833557-1705990930159.jpg

ಹರಿಯಾಣ: ‘ರಾಮಲೀಲಾ’ ನಾಟಕ ಪ್ರದರ್ಶನದ ವೇಳೆ ಹನುಮನ ಪಾತ್ರವನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಹರಿಯಾಣದ ಭೀಮನಿಯಲ್ಲಿ ಸೋಮವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರೀಶ್ ಮೆಹ್ತಾ ಮೃತ ದುರ್ದೈವಿಯಾಗಿದ್ದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣದ ಭೀಮಾನಿಯಲ್ಲಿ ರಾಮಲೀಲಾ ನಾಟಕ ಪ್ರದರ್ಶನ ನಡೆಸಲಾಗುತ್ತಿತ್ತು ಈ ವೇಳೆ ದುರ್ಘಟನೆ ಸಂಭವಿಸಿದೆ.

ಭಿವಾನಿಯ ಜವಾಹರ್ ಚೌಕ್ ಪ್ರದೇಶದಲ್ಲಿ ಭಗವಾನ್ ರಾಮನ ಗೌರವಾರ್ಥ “ರಾಜ್ ತಿಲಕ್” ಎಂಬ ಕಾರ್ಯಕ್ರಮದಲ್ಲಿ ಈ ಘಟನೆಯು ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!