March 21, 2026

ಉನ್ನತ ಪೋಲೀಸ್ ಅಧಿಕಾರಿಯ ಪುತ್ರನ ಹತ್ಯೆ

0
image_editor_output_image-1278781348-1706331907171.jpg

ಹರಿಯಾಣ: ಮದುವೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದೆಹಲಿಯ ಉನ್ನತ ಪೋಲೀಸ್ ಅಧಿಕಾರಿಯ ಪುತ್ರನೊರ್ವ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇದೀಗ ಆತನ ಹತ್ಯೆಯಾಗಿರುವ ಮಾಹಿತಿ ಹೊರ ಬಿದ್ದಿದೆ.

ಹತ್ಯೆಯ ಹಿಂದೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅಲ್ಲದೆ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದಾರೆ.

ವಕೀಲರೂ ಆಗಿರುವ ಲಕ್ಷ್ಯ ಚೌಹಾಣ್ ಅವರನ್ನು ಆತನ ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಮತ್ತು ಅಭಿಷೇಕ್ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಲಕ್ಷ್ಯ ಅವರ ತಂದೆ ಯಶಪಾಲ್ ದೆಹಲಿ ಸಹಾಯಕ ಪೊಲೀಸ್ ಆಯುಕ್ತರಾಗಿದ್ದಾರೆ. ಹಣಕಾಸಿನ ವಿಚಾರವೇ ಕೊಲೆಗೆ ಕರಣ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!