ಕಾರ್ಕಳ: ವಿದ್ಯುತ್ ಅವಘಢ: ಲೈನ್ ಮ್ಯಾನ್ ಸಾವು
ಕಾರ್ಕಳ: ವಿದ್ಯುತ್ ಸರಬರಾಜುನಲ್ಲಿ ಉಂಟಾದ ತಾಂತ್ರಿಕ ಸಮಸ್ಸೆಯನ್ನು ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಅಘಾತಕ್ಕೊಳಗಾಗಿ ಲೈನ್ ಮ್ಯಾನ್ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ಈದು ಗ್ರಾಮದ ನೂರಾಲ್ ಬೆಟ್ಟು ಎಂಬಲ್ಲಿ ಸಂಭವಿಸಿದೆ.
ಬಾಗಲಕೋಟೆಯ ಶ್ರೀನಿವಾಸ (26) ಎಂಬವರು ಘಟನೆಯಲ್ಲಿ ಮೃತಪಟ್ಟ ದುರ್ದೈವಿ.
ಕಳೆದ ಎರಡು ವರ್ಷಗಳ ಹಿಂದೆಯಷ್ಡೇ ಮೆಸ್ಕಾಂ ಇಲಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.




