ಇಟ್ಟಿಗೆಯಿಂದ ಹೊಡೆದು ಸ್ನೇಹಿತನ ಕೊಲೆ
ಬೆಂಗಳೂರು: ಜಗಳವಾಡುತ್ತಿದ್ದ ಸ್ನೇಹಿತನನ್ನು ಪ್ರಶ್ನೆ ಮಾಡಿದಕ್ಕೆ ಇಟ್ಟಿಗೆಯಿಂದ ಹೊಡೆದು ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ದರ್ಶನ್ ಕೊಲೆಯಾದ ದುರ್ದೈವಿ. ಬಾರ್ನಲ್ಲಿ ಪಾರ್ಟಿ ಮಾಡುವ ವೇಳೆ ಸ್ನೇಹಿತರ ಮಧ್ಯೆ ಕಿರಿಕ್ ನಡೆದಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಚಂದ್ರಶೇಖರ್ ಅಲಿಯಾಸ್ ಪ್ರೀತಂ, ಯಶವಂತ, ದರ್ಶನ್, ಪ್ರಶಾಂತ್ ಮತ್ತು ಲಂಕೇಶ್ ಸೇರಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.




